ಸೋಮವಾರ, ಜುಲೈ 1, 2024

 ಕಾಲದ ಮಹಿಮೆ

                                                                image courtesy Pinterest 


 

ಬಿಸಿಲಿನ ತಾಪಕೆ ಅದರುತ ಹಾರಿ

ಕಡಲಿನ ನೀರು ನಭವನು ಸೇರಿ

ಧೂಳಿನ ಕಣಗಳು ಮೋಡದಿ ತೂರಿ

ಮಳೆಯೇ ಸುರಿದಿದೆ ನೋಡದೋ ಜಾರಿ

 

ಬತ್ತಿದ ಗದ್ದೆಗೆ ನೀರಿನ ಹರಿವು

ಭತ್ತದ ತೆನೆಗೆ ನಲಿವೋ ನಲಿವು

ಬಿತ್ತಿದ ರೈತನು ಮರೆತನು ನೋವು

ಭತ್ತದ ಹೊಟ್ಟನು ಮೆಲುಕಿದೆ ಗೋವು

 

ರೈತನ ಕಣಜ ತುಂಬಿತ್ತು

ಬಂಡಿಯು ಸಂತೆಗೆ ಬಂದಿತ್ತು

ವರುಣಗೆ ಪೂಜೆಯು ಸಂದಿತ್ತು

ನೋವಿನ ಛಾಯೆ ನಂದಿತ್ತು

 

ಬೀದಿಯ ಬದಿಯ ವ್ಯಾಪಾರಿ

ಹರಾಜು ಹಾಕಿದ ನಗೆ ಬೀರಿ

ಬಂಗಲೆ ಭೂಪ ಕೊಂಡುಂಡ

ದುಡಿದಾ ರೈತ ನಂಜುಂಡ

 

ರಚನೆ: ಡಾ. ಬೆಳವಾಡಿ ಪ್ರಭಾಕರ್


ಕಾಮೆಂಟ್‌ಗಳಿಲ್ಲ:

ಕಾಮೆಂಟ್‌‌ ಪೋಸ್ಟ್‌ ಮಾಡಿ

ದಾಸರ ಸಂತತಿ ನೋಡಲ್ಲಿ

  ದಾಸರ ಸಂತತಿ ನೋಡಲ್ಲಿ ಕರ್ತೃ: ಡಾ. ಪ್ರಭಾಕರ್ ಬೆಳವಾಡಿ   ದಾಸರಿವರೊ ದಾಸರ ದಾಸರಿವರೊ ವಿಠ್ಠಲ ಕಳಿಸಿಹ ರಾಮಧೂತರಿವರೊ II   ತಂಬೂರಿ ಮೀಟುತ ಪದಗಳ ಹಾಡುತ...