ಶುಕ್ರವಾರ, ಜನವರಿ 24, 2025

ಹನುಮನ ಧ್ಯಾನವ ಮಾಡಿ

 

ಹನುಮನ ಧ್ಯಾನವ ಮಾಡು



 

ಬಿಡುವೇನೇನಯ್ಯ ಹನುಮ ಬಿಡುವೇನೇನಯ್ಯ

ನಿನ್ನ ಬಿಡುವೇನೇನಯ್ಯ                       

 

ನಿರತವೂ ಧ್ಯಾನ ಮಾಡುತಾ ನಿನ್ನ

ಊರುತ ಮಂಡಿಯ ಬೇಡುವೆ ನಿನ್ನ

ಮುಕ್ತಿಯು ಎನಗೆ ಬರುವಾ ತನಕ

ಶಕ್ತಿಯ ನೀಡೋ ಇರುವಾ ತನಕ

ಬಿಡುವೇನೇನಯ್ಯ ನಾನು ಬಿಡುವೇನೇನಯ್ಯ         

 

ಬಾಲವ ಸುತ್ತಿ ಮೇಲಕೆ ಎತ್ತಿ

ಭಯವನು ಬಿತ್ತಿ ಭುವಿಗೇ ಒತ್ತಿ

ಹಚ್ಚಲು ಸುತ್ತ ಬೆಂಕಿಯ ಹುತ್ತ

ಅಂಜುವನೇನೋ ನಿನ್ನಯ ಭಕ್ತ  

ಬಿಡುವೇನೇನಯ್ಯ ನಾನು ಬಿಡುವೇನೇನಯ್ಯ         

 

ಬಿಡುವೇನೇನಯ್ಯ ಹನುಮ ಬಿಡುವೇನೇನಯ್ಯ

ಗದೆಯನೇ ಎತ್ತಿ ಬೀಸಿದರೇನು

ಎದೆಯನೇ ಪಾದದಿ ಒತ್ತಿದರೇನು

ನೀಡಲು ನೀನು ಅಗಣಿತ ಶಿಕ್ಷೆ

ಅದುವೇ ಎನಗೆ ರಾಮರಕ್ಷೆ

ಬಿಡುವೇನೇನಯ್ಯ ನಾನು ಬಿಡುವೇನೇನಯ್ಯ         

 

ಬಿಡುವೇನೇನಯ್ಯ ನಾನು ಬಿಡುವೇನೇನಯ್ಯ

ರಭಸದಿ ಗಾಳಿ ಬೀಸಿದರೇನು

ತರಗೆಲೆಯಂತೆ ಉದರಿದರೇನು   

ಎದೆಯಾ ಸೀಳಿ ನಕ್ಕರೂ ನೀನು 

ಅಂಜೆನು ಹನುಮ ಎಂದಿಗೂ ನಾನು  

ಬಿಡುವೇನೇನಯ್ಯ ನಾನು ಬಿಡುವೇನೇನಯ್ಯ         

 

ಬಿಡುವೇನೇನೋ ಹನುಮ ಬಿಡುವೇನೇನಯ್ಯ

ಭಕ್ತಿಯ ಭವದಲಿ ಮುಳುಗಿಹೆ ನಾನು  

ಹಾರುತ ಬಂದು ಕರುಣಿಸೋ ನೀನು  

ದರುಶನ ನೀನು ನೀಡುವ ತನಕ

ಜ್ಞಾನದ ಬೆಳಕ ತೋರುವ ತನಕ

ಬಿಡುವೇನೇನಯ್ಯ ನಾನು ಬಿಡುವೇನೇನಯ್ಯ         

 

ಬಿಡುವೇನೇನಯ್ಯ ಹನುಮ ಬಿಡುವೇನೇನಯ್ಯ

ಶಿರದ ಮೇಲೆ ಹಸ್ತವನಿಟ್ಟು

ಕರಗಳ ಮುಟ್ಟಿ ಅಭಯವ ಕೊಟ್ಟು 

ಹರಸುವತನಕ ಬಿಡೆನೋ ನಾನು

ಶಬರಿಯ ಹಾಗೇ ಕಾಯುವೆ ನಾನು 

ಬಿಡುವೇನೇನಯ್ಯ ಹನುಮ ಬಿಡುವೇನೇನಯ್ಯ                

 

ಅಂಜನಿ ಪುತ್ರನ ಧ್ಯಾನವ ಮಾಡಿ

ನಿತ್ಯವೂ ಅವನ ಹಾಡನು ಹಾಡಿ

ಹನುಮನೇ ಬರುವನು ತಲೆ ತೂಗಿ

ಪ್ರಭಾಕರ ಶರ್ಮನ ಅವ ಅನುರಾಗಿ

ರಚನೆ: ಡಾ. ಪ್ರಭಾಕರ್ ಬೆಳವಾಡಿ

ಕಾಮೆಂಟ್‌ಗಳಿಲ್ಲ:

ಕಾಮೆಂಟ್‌‌ ಪೋಸ್ಟ್‌ ಮಾಡಿ

ದಾಸರ ಸಂತತಿ ನೋಡಲ್ಲಿ

  ದಾಸರ ಸಂತತಿ ನೋಡಲ್ಲಿ ಕರ್ತೃ: ಡಾ. ಪ್ರಭಾಕರ್ ಬೆಳವಾಡಿ   ದಾಸರಿವರೊ ದಾಸರ ದಾಸರಿವರೊ ವಿಠ್ಠಲ ಕಳಿಸಿಹ ರಾಮಧೂತರಿವರೊ II   ತಂಬೂರಿ ಮೀಟುತ ಪದಗಳ ಹಾಡುತ...